mail-img print-img

ರಾಜ್ಯದಲ್ಲಿ ರ್ಯಾಸ್ಕಲ್‌ಗಳ ಆಡಳಿತ;ರಾಜ್ಯಾದ್ಯಂತ ಬಿಜೆಪಿ ಹಠಾವೋ ಚಳವಳಿಯಾಗಲಿ: ಎಚ್.ಎಸ್.ದೊರೆಸಾ್ವಮಿ

ಮಂಗಳವಾರ - ಜುಲೈ -10-2012

ಬೆಂಗಳೂರು, ಜು. 9: ರಾಜ್ಯದಲ್ಲಿ ರ್ಯಾಸ್ಕಲ್‌ಗಳು ಅಧಿಕಾರ ನಡೆಸುತ್ತಿದ್ದಾರೆ. ಮೂರು ವರ್ಷಗಳಲ್ಲಿ ಮೂವರು ಮುಖ್ಯಮಂತ್ರಿಗಳಾದರು. ಕೆಲವರು ಜೈಲಿಗೋದರೆ, ಮತ್ತೆ ಕೆಲವರು ಕೋರ್ಟ್‌ಗಳಿಗೆ ಅಲೆಯುತ್ತಿದ್ದಾರೆ. ಇಂತಹ ಸರಕಾರವನ್ನು ಕಿತ್ತೊಗೆ ಯಲು ರಾಜ್ಯಾದ್ಯಂತ ಬಿಜೆಪಿ ಹಠಾವೋ ಚಳವಳಿಯನ್ನು ಹಮ್ಮಿಕೊಳ್ಳುವ ಅಗತ್ಯವಿದೆ ಎಂದು ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್. ಎಸ್.ದೊರೆಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ಸೋಮವಾರ ನಗರದ ಭಾರತೀಯ ವಿದ್ಯಾ ಭವನದಲ್ಲಿ ದಿ ಸ್ಪೈಡರ್ ಆಫ್ ಇಂಡಿಯಾ ಕನ್ನಡ ವಾರ ಪತ್ರಿಕೆ ಬಿಡುಗಡೆ ಕಾರ್ಯ ಕ್ರಮವನ್ನು ಉದ್ಘಾಟಸಿ ಅವರು ಮಾತನಾಡುತ್ತಿ ದ್ದರು.
ಬಿಜೆಪಿಯವರು ರಾಜಕೀಯ ಅನಾಚಾರದ ಹಾದಿಯಲ್ಲಿ ಬಹಳ ದೂರ ಸಾಗಿದ್ದಾರೆ. ಅವರು ನಡೆದಿರುವ ಹಾದಿ ಹೊಲಸು ಮತ್ತು ಅಮೇಧ್ಯ ದಿಂದ ಕೂಡಿದೆ. ಬಿಜೆಪಿಯ ಹೈಕಮಾಂಡ್‌ನ ದೊಡ್ಡ ನಾಯಕರೆಲ್ಲ ಇಂತಹ ಕೆಟ್ಟ ಸರಕಾರಕ್ಕೆ ಆದ್ಯತೆ ನೀಡುತ್ತಿದ್ದಾರೆ ಎಂದು ದೊರೆಸ್ವಾಮಿ ಕಿಡಿ ಕಾರಿದರು.
ಒಬ್ಬ ಮನುಷ್ಯನನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಬಿಜೆಪಿ ಹೈಕಮಾಂಡ್ ಜಾತಿ ರಾಜಕಾರಣ ದಂತಹ ದುರ್‌ರ್ಮಾರ್ಗವನ್ನು ಅನುಸರಿಸುತ್ತಿದೆ. ರಾಜ್ಯದಲ್ಲಿ ಭ್ರಷ್ಟಾಚಾರ, ಜಾತಿ ರಾಜಕಾರಣ, ಅರಾಜಕತೆ ತಾಂಡವವಾಡುತ್ತಿದ್ದರೂ ಎಲ್ಲಾ ರಾಜಕೀಯ ಪಕ್ಷಗಳು ನಿಷ್ಕ್ರಿಯಗೊಂಡಿವೆ. ಜನರೂ ಕೂಡ ಇಂತಹ ಅನಾಚಾರಗಳನ್ನು ನೋಡಿಕೊಂಡು ಸತ್ತಂತಿದ್ದಾರೆ. ಇಂತಹ ಸಂದರ್ಭದಲ್ಲಿ ಸಮಾಜವನ್ನು ಪತ್ರಿಕೆಗಳು ಎಚ್ಚರಿಸಬೇಕು. ಬಿಜೆಪಿಯಂತಹ ಪಕ್ಷಗಳನ್ನು ತೊಡೆದು ಹಾಕಲು ಎಲ್ಲಾ ಪತ್ರಿಕೆಗಳು ತಯಾ ರಾದರೆ ದೇಶ ಉಳಿಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಪತ್ರಿಕೆಗಳು ಜನರಿಗೆ ತಲುಪಬೇಕಾದರೆ ಉತ್ತಮ ಜನಸ್ಪಂದನೆ ಅಗತ್ಯ. ಪತ್ರಿಕೆಗಳು ಜೀವಂತಿಕೆಯಿಂದ ಇರಬೇಕಾದರೆ, ಬರ ಗಾರರು ಜನರ ಮನಸ್ಸನ್ನು ಗೆಲ್ಲುವಂತೆ ಬರೆಯ ಬೇಕು. ಇಲ್ಲದಿದ್ದರೆ ಪತ್ರಿಕೆ ರದ್ಧಿಯಾಗುತ್ತದೆ. ಆದುದರಿಂದ ಪತ್ರಿಕೆಗಳು ಸದಾ ಜನರನ್ನು ಅನ್ಯಾ ಯದ ವಿರುದ್ಧ ಜನ ಜಾಗೃತಿಗೊಳಿಸುವ ಹಾಗೂ ಹೋರಾಟಕ್ಕೆ ಅಣಿಗೊಳಿಸುವ ಕೆಲಸ ವನ್ನು ಮಾಡಬೇಕು ಎಂದು ದೊರೆಸ್ವಾಮಿ ಹೇಳಿದರು.
ಇದೇ ವೇಳೆ ಪತ್ರಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ ಕಂಬಾರ, ಸಣ್ಣ ಪತ್ರಿಕೆಗಳು ಜನಸಾಮಾನ್ಯರಿಗೆ ತಲುಪಿ ಅವರನ್ನು ಎಚ್ಚರಿಸುವ ಕೆಲಸ ಮಾಡುತ್ತಿವೆ. ಸಣ್ಣ ಪತ್ರಿಕೆಗಳಿಂದ ಕನ್ನಡದ ಅಭಿವೃದ್ಧಿ ಹಾಗೂ ಬೆಳವಣಿಗೆ ಸಾಧ್ಯ. ರಾಜ್ಯದಲ್ಲಿ ಸುಮಾರು 8 ಸಾವಿರ ಸಣ್ಣ ಪತ್ರಿಕೆಗಳಿದ್ದು, ಈ ಪತ್ರಿಕೆಗಳಿಂದ ಕನ್ನಡ ಸಾರಸ್ವತ ಲೋಕಕ್ಕೆ ಪ್ರತಿ ತಿಂಗಳು ಸುಮಾರು ನೂರರಿಂದ ನೂರಿಪ್ಪತ್ತು ಹೊಸ ಶಬ್ದಗಳು ಸೇರುತ್ತಿವೆ. ಆ ಮೂಲಕ ಕನ್ನಡದ ಬೆಳವಣಿಗೆಗೆ ಸಣ್ಣ ಪತ್ರಿಕೆಗಳ ಕೊಡುಗೆ ಅಪಾರವಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಮಾಜಿ ಮೇಯರ್ ಜೆ.ಹುಚ್ಚಪ್ಪ, ಪತ್ರಿಕೆಯ ಸಂಪಾದಕ ಎಚ್.ಎಚ್. ಧನಂಜಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.



Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಆಹಾರದ ಹಾಹಾಕಾರ

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಹದಿನಾಲ್ಕು ವರ್ಷದ ಹುಡುಗಿ ಮತ್ತು ಮೂರು ವರ್ಷದ ಹುಡುಗ ಹಸಿವಿನಿಂದಾಗಿ ಬರ್ಬರ ಸಾವನ್ನಪ್ಪಿದ್ದಾರೆ. ನಾಝ್ರಾ ಖಾತೂನ್ ಎನ್ನ ...


ನಿಮ್ಮ ಅನಿಸಿಕೆ

postClick here to post your views
EPAPER
access

ಇದು ಪ್ರಜಾಪ್ರಭುತ್ವದ ಪವಾಡ

ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...


- ಸನತ್‌ಕುಮಾರ ಬೆಳಗಲಿ

ಉತ್ತರಕುಮಾರಿಯರು, ಉತ್ತರಭೂಪರು ಮತ್ತು ಉತ್ತರಪತ್ರಿಕೆಗಳು!

ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...


- ಅಶೋಕ್ ಶೆಟ್ಟರ್

ಮನೋಲ್ಲಾಸದ ನಾಲೆಗಳು: (ಭಾಗ-1)

ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...


- ಶೂದ್ರ ಶ್ರೀನಿವಾಸ್

ಐದು ವರ್ಷದ ಹಸುಳೆಗೆ ಉತ್ತರಿಸುವ ದಾರ್ಷ್ಟ ನಮಗಿದೆಯೆ?

ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...


- ನಾ ದಿವಾಕರ್

ವಿಪ್ರ ಸಮ್ಮೇಳನದಂಥ ಸಂಕುಚಿತ ಜಾತಿ ಕೂಟಗಳು ಉದಾತ್ತ ಚಿಂತನೆಗೆ ವೇದಿಕೆಯಾಗಲಿ...

ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...


- ದುರ್ಗಾ ಎಸ್. ಭಟ್

ಅಕ್ಷರ ಸೇವೆಯಿಂದ ಜನಸೇವೆಗೆ;ತೆಂಕಮಿಜಾರಿನ ಮುತ್ತು

ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...


- ಪ್ರೇಮಶ್ರೀ ಕಲ್ಲಬೆಟ್ಟು

ನಾನು ಮತ್ತು ದೇವರು

 ರಿನಲ್ಲಿದ್ದಾಗ ಪೂಜೆ ಮಾಡುತ್ತಿದ್ದದ್ದು ವಿಚಿತ್ರ ಅನಿಸುತ್ತಿತ್ತು. ಅವಳು ರಾತ್ರ ...


- ಸುನೀಲ್ ರಾವ್

ಬಿಟ್ಟಿ ಅಂಕದ ಪಿಯುಸಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಬುಟ್ಟಿಗೆಸೆ!

 ಮಾನ್ಯರೆ,

ಪ್ರಶ್ನೆ ಪತ್ರಿಕೆಗಳಲ್ಲಿ ದೋಷಗಳನ್ನು ನೀಡುವ ತನ್ನ ಸಂಪ್ರದಾಯವನ್ನು ಪಿಯುಸಿ ಮಂಡಳಿಯ ...


- -‘ಮಾತರಿ’ ಸಾಗ