ಬೆಂಗಳೂರು, ಜು. 24: ಕ್ಯಾನ್ಸರ್ ಸಹಿತ ವಿವಿಧ ಮಾರಕ ರೋಗಗಳಿಗೆ ತುತ್ತಾಗಿರುವ ಬಡತನ ರೇಖೆಗಿಂತ ಕೆಳ ಗಿರುವ ರೋಗಿಗಳಿಗೆ 2ಲಕ್ಷ ರೂ.ಗಳ ವರೆಗೆ ಉಚಿತ ಚಿಕಿತ್ಸೆ ಮತ್ತು ಶಸ್ತ್ರ ಚಿಕಿತ್ಸೆಯ ವೆಚ್ಚವನ್ನು ಸರಕಾರವೆ ಭರಿ ಸಲಿದೆ ಎಂದು ಮುಖ್ಯಮಂತ್ರಿ ಜಗ ದೀಶ್ ಶೆಟ್ಟರ್ ಭರವಸೆ ನೀಡಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ನಡೆದ ಗ್ಲೋಬಲ್ ಅಡಲ್ಟ್ ಟೊಬೊ ಕೋ ಅಧ್ಯಯನ ವರದಿಯನ್ನು ಬಿಡು ಗಡೆ ಮಾಡಿ ಮಾತನಾಡಿದ ಅವರು, ಕ್ಯಾನ್ಸರ್ ರೋಗದ ಪತ್ತೆಗೆ ರಾಜ್ಯಾ ದ್ಯಂತ ತಪಾಸಣಾ ಶಿಬಿರಗಳನ್ನು ನಡೆ ಸುತ್ತಿದ್ದು, ರೋಗದ ಲಕ್ಷಣಗಳಿರುವ ವರಿಗೆ ಕಿದ್ವಾಯಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದರು.ರಾಜ್ಯದಲ್ಲಿ ಒಟ್ಟು 20 ಸಾವಿರ ರೋಗಿಗಳನ್ನು ಗುರುತಿಸಲಾಗಿದ್ದು ಅವರ ಚಿಕಿತ್ಸೆಗೆ ಸರಕಾರ 113 ಕೋಟಿ ರೂ.ವೆಚ್ಚ ಮಾಡಲಿದೆ ಎಂದ ಶೆಟ್ಟರ್, ಪ್ರಸ್ತುತ ವರ್ಷ ಒಟ್ಟು 70 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ವಾಜ ಪೇಯಿ ಆರೋಗ್ಯ ಶ್ರೀ ಯೋಜನೆ ಯನ್ನು ಗುಲ್ಬರ್ಗ ಮತ್ತು ಬೆಳಗಾವಿ ವಿಭಾಗಗಳಿಗೂ ವಿಸ್ತರಿಸ ಲಾಗುವುದು ಎಂದು ಹೇಳಿದರು.
ತಂಬಾಕು ಸೇವನೆ ಆರೋಗ್ಯಕ್ಕೆ ಅತ್ಯಂತ ಆತಂಕಕಾರಿ. ಶೇ.40ರಷ್ಟು ಕ್ಯಾನ್ಸರ್ಗೆ ತಂಬಾಕೆ ಕಾರಣ. ಪ್ರತಿ ಮೂವರಲ್ಲಿ ಒಬ್ಬ ತಂಬಾಕಿನಿಂದ ಪ್ರಾಣ ಕಳೆದುಕೊಳ್ಳುತ್ತಿದ್ದಾನೆ ಎಂದ ಅವರು, ದೇಶದಲ್ಲಿ 10ಲಕ್ಷಕ್ಕೂ ಹೆಚ್ಚು ಮಂದಿ ತಂಬಾಕು ಸೇವನೆಯಿಂದ ವಿವಿಧ ಖಾಯಿಲೆಗಳಿಗೆ ತುತ್ತಾಗಿದ್ದಾರೆ ಎಂದರು.ಕಾರ್ಯಕ್ರಮದಲ್ಲಿ ಸಭಾಪತಿ ಡಿ.ಎಚ್.ಶಂಕರ ಮೂರ್ತಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಸುರೇಶ್ ಕುಮಾರ್, ರಾಮದಾಸ್, ರೇವೂನಾಯಕ್ ಬೆಳಮಗಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
‘ಮುರಿದು ನೇತಾಡುತ್ತಿರುವ ಏಸುವಿನ ಕೈ, ಮುರಿದ ಕಾಲು, ಒಡೆದ ಮುಖ....’’ ಈ ಸಮಾಜದ ಕ್ರೌರ್ಯ ಮತ್ತು ವಿರೂಪಕ್ಕೆ ಹಿಡಿದ ಕನ್ನಡಿಯಂತೆ ಮಾಧ್ಯಮಗಳ ಮುಖಪುಟದಲ್ಲ ...
Click here to post your views ಇಂದು ಇಂಡಿಯಾದ ಸಮಕಾಲೀನ ರಾಜಕೀಯ ಮಾದರಿಗಳು ತನ್ನ ಸೋಲೊಪ್ಪದ ಛಾತಿ ಮತ್ತು ಇಚ್ಛಾಶಕ್ತಿ, ಧನ ...
ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...
ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...
ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...
ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...
ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...
ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...
ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...