mail-img print-img

ನ್ಯಾಯಾಲಯ ಕಲಾಪ ವರದಿಗಾರಿಕೆ;ಮಾರ್ಗದರ್ಶಿ ಸೂತ್ರ ರೂಪಿಸಲು ಸುಪ್ರೀಂ ನಿರಾಕರಣೆ

ಬುಧವಾರ - ಸೆಪ್ಟೆಂಬರ್ -12-2012

ಹೊಸದಿಲ್ಲಿ, ಸೆ11: ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನು ವರದಿ ಮಾಡುವುದಕ್ಕೆ ಸಂಬಂಧಿಸಿ ಸಾರಾಸಗಟು (ಎಲ್ಲರಿಗೂ ಸಮಾನವಾಗಿ ಅನ್ವಯವಾಗುವ) ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ. ಆದರೆ,ಸಾಂವಿಧಾನಿಕ ತತ್ವವೊಂದನ್ನು ಅನುಷ್ಠಾನಗೊಳಿಸಿದ್ದು, ಅದರ ಪ್ರಕಾರ ನ್ಯಾಯಾಲಯದ ವಿಚಾರಣೆಗಳಿಗೆ ಸಂಬಂಧಿಸಿದ ವರದಿಗಳ ಪ್ರಕಟನೆಯನ್ನು ಮುಂದೂಡುವಂತೆ ಸಂತ್ರಸ್ತ ಪಕ್ಷಗಳು ಕೋರಬಹುದಾಗಿದೆ. ನ್ಯಾಯಾಲಯಗಳಲ್ಲಿ ನಡೆಯುವ ವಿಚಾರಣೆಗಳಿಗೆ ಸಂಬಂಧಿಸಿದ ವರದಿಗಳ ಪ್ರಕಟನೆಯನ್ನು ಮುಂದೂಡುವಂತೆ ಸಂಬಂಧಪಟ್ಟ ನ್ಯಾಯಾಲಯ ಗಳನ್ನು ಕೋರಲು ಸಂತ್ರಸ್ತ ಪಕ್ಷಗಳಿಗೆ ಅವಕಾಶ ಮಾಡಿಕೊಡುವ ಸಾಂವಿಧಾನಿಕ ತತ್ವವನ್ನು ಅನುಷ್ಠಾನಗೊಳಿಸುತ್ತಿರುವು ದಾಗಿ ಮುಖ್ಯ ನ್ಯಾಯಾಧೀಶ ಎಸ್.ಎಚ್.ಕಪಾಡಿಯಾ ನೇತೃತ್ವದ ಐವರು ನ್ಯಾಯಾಧೀಶರ ನ್ಯಾಯಪೀಠ ತಿಳಿಸಿದೆ. ನ್ಯಾಯಾಲಯ ಕಲಾಪಗಳ ಮುಂದೂಡಿಕೆಯ ಪ್ರಶ್ನೆಯನ್ನು ಪ್ರತಿಯೊಂದು ಪ್ರಕರಣದ ಆಧಾರದಲ್ಲಿ ಸಂಬಂಧಪಟ್ಟ ನ್ಯಾಯಾಲಯವು ಇತ್ಯರ್ಥಪಡಿಸುವುದು ಎಂದು ಪೀಠ ಹೇಳಿತು.

“ನಾವು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸುತ್ತಿಲ್ಲ. ಬದಲಿಗೆ ಸಾಂವಿಧಾನಿಕ ತತ್ವವನ್ನು ಜಾರಿಗೊಳಿಸುತ್ತಿದ್ದೇವೆ. ವರದಿ ಪ್ರಕಟನೆ ಮುಂದೂಡಿಕೆ ಆದೇಶವನ್ನು ಯಾವಾಗ ಹೊರಡಿಸಬೇಕೆನ್ನುವುದನ್ನು ಪ್ರತಿ ಪ್ರಕರಣದ ಆಧಾರದಲ್ಲಿ ನ್ಯಾಯಾಲಯಗಳು ನಿರ್ಧರಿಸುತ್ತವೆ” ಎಂದು ಪೀಠ ಹೇಳಿತು. ಪೀಠದಲ್ಲಿ ನ್ಯಾ. ಕಪಾಡಿಯ ಅವರಲ್ಲದೆ, ನ್ಯಾ. ಡಿ.ಕೆ. ಜೈನ್, ನ್ಯಾ. ಎಸ್.ಎಸ್. ನಿಜ್ಜರ್, ನ್ಯಾ. ರಂಜನಾ ಪ್ರಕಾಶ್ ದೇಸಾಯಿ ಮತ್ತು ನ್ಯಾ. ಜೆ.ಎಸ್. ಖೇಹರ್ ಇದ್ದರು.ನ್ಯಾಯಾಲಯ ಕಲಾಪಗಳ ಕುರಿತ ಸುದ್ದಿ ಪ್ರಕಟನೆಯನ್ನು ಮುಂದೂಡುವ ಬಗ್ಗೆ ಪ್ರಸ್ತಾಪಿಸಿದ ನ್ಯಾಯಾಲಯ, ಈ ಕ್ರಮ ಪ್ರತಿಬಂಧಕವೇ ಹೊರತು, ನಿಷೇಧಾತ್ಮಕ ಅಥವಾ ಶಿಕ್ಷಾ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟಿತು.

ವಾಕ್ ಸ್ವಾತಂತ್ರ ಮತ್ತು ಪ್ರಭಾವಶಾಲಿ ನ್ಯಾಯ ನೀಡಿಕೆಯನ್ನು ಖಾತರಿಪಡಿಸುವ ನ್ಯಾಯೋಚಿತ ವಿಚಾರಣೆಯ ನಡುವೆ ಸಮತೋಲನವನ್ನು ಸಾಧಿಸುವುದಕ್ಕಾಗಿ ಕಲಾಪಗಳ ವರದಿಗಾರಿಕೆಯ ಮೇಲೆ ತಾತ್ಕಾಲಿಕ ನಿಷೇಧ ಅಗತ್ಯವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಲೋಕಾಯುಕ್ತಕ್ಕೆ ಇನ್ನಷ್ಟು ಅಧಿಕಾರ

ಲೋಕಾಯುಕ್ತಕ್ಕೆ ಇನ್ನಷ್ಟು ಅಧಿಕಾರ ಹೇಗೆ ಚುನಾವಣಾ ಆಯೋಗಕ್ಕೆ ಟಿ.ಎನ್.ಶೇಷನ್ ಅವರು ಜೀವಕೊಟ್ಟರೋ ಹಾಗೆಯೇ ಕರ್ನಾಟಕದಲ್ಲಿ ಲೋಕಾಯುಕ್ತವೆಂಬ ಸಂಸ್ಥೆಯಿರುವುದು ಬ ...


ನಿಮ್ಮ ಅನಿಸಿಕೆ

postClick here to post your views
EPAPER
access

ಎದೆಗೆ ಬಿದ್ದ ಗಾಂಧಿ!

ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...


- ರಘೋತ್ತಮ ಹೊ.ಬ, ಚಾಮರಾಜನಗರ

ಡೆಂಗ್ ರೋಗ ಲಕ್ಷಣಗಳು ಮತ್ತು ನಿಯಂತ್ರಣ

ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...


- ಬಿ.ಶಿವಕುಮಾರ್,ವಾರ್ತಾ ಇಲಾಖೆ, ಉಡುಪಿ

14ನೆ ವಿಧಾನಸಭೆ: ಚುರುಕಾಗಿ 5ನೆ ಸಭೆಯ ದಾಖಲೆ ದಾಟಬೇಕು

 ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...


- ಬಿ.ಜಿ.ಬಣಕಾರ ಮಾಜಿ ವಿಧಾನಸಭಾಧ್ಯಕ್ಷರು

ಜನ ಬಯಸುವ ಪರ್ಯಾಯ

ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...


- ಸನತ್‌ಕುಮಾರ ಬೆಳಗಲಿ

Coalಯುಪಿಎನಲ್ಲಿ -ಮಿಂಚು, ಎನ್‌ಡಿಎನಲ್ಲಿ ಮೋದಿ ಸಂಚು...

ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...


- ಪಿ.ಕೆ.ಮಲ್ಲನಗೌಡರ್

ಒಬ್ಬ ಅಪೂರ್ವ ವ್ಯಕ್ತಿ ಮರೆಯಾದಾಗ...

ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...


- ಶೂದ್ರ ಶ್ರೀನಿವಾಸ್

ಎರಡೂವರೆ ಎಕರೆ ಬದಿಗಿಟ್ಟು, 4 ಲಕ್ಷ ಎಕರೆಯನ್ನು ನಮ್ಮದಾಗಿಸೋಣ....

ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...


- ಬಿ.ಎಂ.ಬಶೀರ್

ರಾಜಕೀಯ ಪಕ್ಷಗಳ ಆತ್ಮವಿಮರ್ಶೆ ಅಗತ್ಯ

ಕೇಂದ್ರ ಅಥವಾ ರಾಜ್ಯಗಳಲ್ಲಿ ಯಾವುದೇ ಸರಕಾರ ಅಧಿಕಾರ ವಹಿಸಿಕೊಂಡ ಕೂಡಲೇ ರಾಷ್ಟ್ರಪತಿಗಳು ಮತ್ತು ರ ...


- ನಾ ದಿವಾಕರ್