*ಡಿವಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲು ಬೆಂಬಲಿಗರ ಒತ್ತಾಯ
*ಯಡಿಯೂರಪ್ಪ ಬಣದ ತೀವ್ರ ವಿರೋಧ
ಬೆಂಗಳೂರು, ಜು.9: ನಿರ್ಗಮನ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುವಂತೆ ಅವರ ಬೆಂಬಲಿಗ ಸಚಿವರು ಹಾಗೂ ಶಾಸಕರು ಹೈಕಮಾಂಡ್ಗೆ ಒತ್ತಾಯ ಹೇರಿದ್ದು, ಇದಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಣ ವಿರೋಧ ವ್ಯಕ್ತಪಡಿಸಿದೆ.ಯಾವುದೇ ಕಾರಣಕ್ಕೂ ಸದಾನಂದ ಗೌಡರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬಾರದು ಎಂದು ಆಗ್ರಹಿಸಿರುವ ಯಡಿಯೂರಪ್ಪ ಬಣ, ಗೌಡರನ್ನು ರಾಜ್ಯ ರಾಜಕೀಯದಿಂದ ದೂರವಿಡಲು ಷಡ್ಯಂತ್ರ ರೂಪಿಸಿದೆ. ನಂದ ಗೌಡರನ್ನು ನಿನ್ನೆ ‘ಅನುಗ್ರಹ’ದಲ್ಲಿ ಅವರ ಬೆಂಬಲಿಗ ಸಚಿವರು ಹಾಗೂ ಶಾಸಕರು ಭೇಟಿಯಾಗಿದ್ದರು. ಈ ವೇಳೆ ರಾಜ್ಯಾಧ್ಯಕ್ಷ ಪಟ್ಟವನ್ನು ಅವರು ಅಲಂಕರಿಸಬೇಕು. ಇದಕ್ಕೆ ತಾವು ವರಿಷ್ಠರಿಗೆ ಒತ್ತಾಯ ಹೇರುತ್ತೇವೆ ಎಂದು ಹೇಳಿ ಒಪ್ಪಿಗೆಯನ್ನೂ ಪಡೆದಿದ್ದರು.
ಈ ವಿಷಯ ಯಡಿಯೂರಪ್ಪ ಬಣಕ್ಕೆ ತಿಳಿಯು ತ್ತಿದ್ದಂತೆ ಇಂದು ಡಾಲರ್ಸ್ ಕಾಲನಿಯಲ್ಲಿರುವ ಯಡಿಯೂರಪ್ಪನವರ ನಿವಾಸದಲ್ಲಿ ಸಭೆ ಸೇರಿ, ಬಿರುಸಿನ ಚರ್ಚೆ ನಡೆಸಿತು.ಸಭೆಯಲ್ಲಿ ಯಡಿಯೂರಪ್ಪ, ಸಚಿವರಾದ ಬಸವರಾಜ ಬೊಮ್ಮಾಯಿ, ಸಿ.ಎಂ.ಉದಾಸಿ, ಮುರುಗೇಶ್ ನಿರಾಣಿ, ಸೋಮಣ್ಣ ಸೇರಿದಂತೆ ಹಲವರು ಹಾಜರಿದ್ದರು.ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಯಡಿಯೂರಪ್ಪ, 2013ರ ಜನವರಿಯಲ್ಲಿ ಹಾಲಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪನವರ ಅವಧಿ ಅಂತ್ಯಗೊಂಡ ನಂತರ ಈ ಪಟ್ಟವೇರಲು ತಂತ್ರ ರೂಪಿಸಿದ್ದಾರೆ.
ಈಶ್ವರಪ್ಪ ಅವಧಿ ಮುಗಿಯುತ್ತಿದ್ದಂತೆ ವಿಧಾನಸಭೆಯ ಚುನಾವಣೆ ಕೂಡಾ ಎದುರಾಗಲಿದ್ದು, ಈ ವೇಳೆ ಪಟ್ಟ ಅಲಂಕರಿಸಿದರೆ ಮುಂದೆ ಮತ್ತೆ ಸಿಎಂ ಪಟ್ಟಕ್ಕೇರುವುದು ಸುಲಭ. ಜೊತೆಗೆ ಈ ಸಂದರ್ಭದಲ್ಲಿ ಸಿಬಿಐ ಸೇರಿದಂತೆ ತಮ್ಮ ಮೇಲಿರುವ ಎಲ್ಲ ವಿಚಾರಣೆ, ಆರೋಪಗಳಿಂದ ಮುಕ್ತರಾಗಿ ಹೊರಬರುವ ವಿಶ್ವಾಸವಿಟ್ಟುಕೊಂಡು ರಾಜ್ಯಾಧ್ಯಕ್ಷ ಪಟ್ಟದ ಮೇಲೆ ಯಡ್ಡಿ ಕಣ್ಣಿಟ್ಟಿದ್ದಾರೆ.
ಇಂದು ತಮ್ಮ ನಿವಾಸದಲ್ಲಿ ಸಭೆ ನಡೆಸಿರುವ ಯಡಿಯೂರಪ್ಪ, ಯಾವುದೇ ಕಾರಣಕ್ಕೂ ಸದಾನಂದ ಗೌಡರಿಗೆ ಈ ಪಟ್ಟ ನೀಡದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಮತ್ತೆ ಹೋರಾಟ ನಡೆಸುವ ಅನಿವಾರ್ಯ ಬಂದರೂ ಅದರಿಂದ ಹಿಂದೆ ಸರಿಯಬಾರದು ಎಂದು ತಮ್ಮ
ಭಾರತಕ್ಕೆ ಅಂತಾರಾಷ್ಟ್ರೀಯ ಮಟ್ಟದ ಮ್ಯಾನ್ ಬೂಕರ್ ಪ್ರಶಸ್ತಿ ಕೂದಲೆಳೆಯಲ್ಲಿ ಕೈ ತಪ್ಪಿತು. ಅಮೆರಿಕದ ಹಿರಿಯ ಬರಹಗಾರ್ತಿ ಲಿಡಿಯಾ ಡೇವಿಸ್ ಈ ಪ್ರಶಸ್ತಿಯನ್ನ ...
Click here to post your views ಜನ ಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ಸ್ವಾವಲಂಬನೆಗೆ ಸೂಕ್ತವಾದ ಕಾರ್ಯಗಳನ್ನು ರೂಪಿಸಬೇಕ ...
ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...
ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...
ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...