mail-img print-img

ಬೆಸ್ಟ್ ಬೇಕರಿ ಪ್ರಕರಣ: ನಾಲ್ವರಿಗೆ ಜೀವಾವಧಿ; ಐವರ ಖುಲಾಸೆ

ಮಂಗಳವಾರ - ಜುಲೈ -10-2012

ಮುಂಬೈ, ಜು.9: ಗುಜರಾತ್‌ನ ಬೆಸ್ಟ್ ಬೇಕರಿ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್ ಇಂದು ಸಾಕ್ಷಗಳ ಕೊರತೆಯಿಂದ ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ್ದು, ಇತರ ನಾಲ್ವರಿಗೆ ಜೀವಾವಧಿ ಶಿಕ್ಷೆ ವಿಧಿಸಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿದೆ.ವಿಚಾರಣಾ ನ್ಯಾಯಾಲಯದ ವಿರುದ್ಧ ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿ.ಎಂ.ಕಾನಡೆ ಹಾಗೂ ಪಿ.ಡಿ.ಕೋಡೆಯವರಿದ್ದ ವಿಭಾಗೀಯ ಪೀಠವೊಂದು ತೀರ್ಪನ್ನು ಮರು ಪರಿಶೀಲಿಸಿ ಜು.3ರಂದು ಸಂಜಯ್ ಠಕ್ಕರ್, ಬಹಾದ್ದೂರ್ ಸಿಂಗ್ ಚೌಹಾಣ್, ಸನಾಭಾಯಿ ಬರಿಯಾ ಹಾಗೂ ದಿನೇಶ್ ರಾಜಭರ್ ಎಂಬವರ ಜೀವಾವಧಿ ಶಿಕ್ಷೆಯನ್ನಷ್ಟೇ ಎತ್ತಿ ಹಿಡಿಯಿತು. ನ್ಯಾಯ ಮೂರ್ತಿಗಳು ದಂಗೆಯಲ್ಲಿ ಗಾಯಗೊಂಡಿದ್ದ ನಾಲ್ವರು ಬೆಸ್ಟ್ ಬೇಕರಿ ನೌಕರರ ಸಾಕ್ಷವನ್ನು ನಂಬಿದೆ. ಅವರು ಆರೋಪಿಗಳನ್ನು ಗುರುತಿಸಿದ್ದರು. ಹಾಗೂ ಈ ಆರೋಪಿಗಳು ದಂಗೆಯ ವೇಳೆ ಮಾರಕಾಯುಧಗಳೊಂದಿಗೆ ಸ್ಥಳದಲ್ಲಿದ್ದರೆಂದು ಸಾಕ್ಷ ನುಡಿದಿದ್ದರು.

ಆದಾಗ್ಯೂ, ವಿಚಾರಣಾ ನ್ಯಾಯಾಲಯದ ಆದೇಶವನ್ನು ತಳ್ಳಿ ಹಾಕಿದ ಹೈಕೋರ್ಟ್ ಪೀಠ, ರಾಜುಭಾಯಿ ಬರಿಯಾ, ಪಂಕಜ್ ಗೋಸಾವಿ, ಜಗದೀಶ್ ರಾಜಪುತ್, ಸುರೇಶ್ ಅಲಿಯಾಸ್ ಲಾಲೊ ದೇವಜಿ ಭಾಯಿ ವಾಸವ ಹಾಗೂ ಶೈಲೇಶ್ ತಡ್ರಿ ಎಂಬವರನ್ನು ಸಾಕ್ಷಗಳ ಕೊರತೆಯ ಕಾರಣ ಬಿಡುಗಡೆಗೊಳಿಸಿದೆ.2002ರ ಗುಜರಾತ್ ದಂಗೆಯ ವೇಳೆ ವಡೋದರಾದ ಬೆಸ್ಟ್ ಬೇಕರಿಯಲ್ಲಿ ದುಷ್ಕರ್ಮಿಗಳು 14 ಮಂದಿಯನ್ನು ಸಜೀವವಾಗಿ ದಹಿಸಿದ್ದರು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಲೋಕಾಯುಕ್ತಕ್ಕೆ ಇನ್ನಷ್ಟು ಅಧಿಕಾರ

ಲೋಕಾಯುಕ್ತಕ್ಕೆ ಇನ್ನಷ್ಟು ಅಧಿಕಾರ ಹೇಗೆ ಚುನಾವಣಾ ಆಯೋಗಕ್ಕೆ ಟಿ.ಎನ್.ಶೇಷನ್ ಅವರು ಜೀವಕೊಟ್ಟರೋ ಹಾಗೆಯೇ ಕರ್ನಾಟಕದಲ್ಲಿ ಲೋಕಾಯುಕ್ತವೆಂಬ ಸಂಸ್ಥೆಯಿರುವುದು ಬ ...


ನಿಮ್ಮ ಅನಿಸಿಕೆ

postClick here to post your views
EPAPER
access

ಎದೆಗೆ ಬಿದ್ದ ಗಾಂಧಿ!

ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...


- ರಘೋತ್ತಮ ಹೊ.ಬ, ಚಾಮರಾಜನಗರ

ಡೆಂಗ್ ರೋಗ ಲಕ್ಷಣಗಳು ಮತ್ತು ನಿಯಂತ್ರಣ

ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...


- ಬಿ.ಶಿವಕುಮಾರ್,ವಾರ್ತಾ ಇಲಾಖೆ, ಉಡುಪಿ

14ನೆ ವಿಧಾನಸಭೆ: ಚುರುಕಾಗಿ 5ನೆ ಸಭೆಯ ದಾಖಲೆ ದಾಟಬೇಕು

 ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...


- ಬಿ.ಜಿ.ಬಣಕಾರ ಮಾಜಿ ವಿಧಾನಸಭಾಧ್ಯಕ್ಷರು

ಜನ ಬಯಸುವ ಪರ್ಯಾಯ

ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...


- ಸನತ್‌ಕುಮಾರ ಬೆಳಗಲಿ

Coalಯುಪಿಎನಲ್ಲಿ -ಮಿಂಚು, ಎನ್‌ಡಿಎನಲ್ಲಿ ಮೋದಿ ಸಂಚು...

ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...


- ಪಿ.ಕೆ.ಮಲ್ಲನಗೌಡರ್

ಒಬ್ಬ ಅಪೂರ್ವ ವ್ಯಕ್ತಿ ಮರೆಯಾದಾಗ...

ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...


- ಶೂದ್ರ ಶ್ರೀನಿವಾಸ್

ಎರಡೂವರೆ ಎಕರೆ ಬದಿಗಿಟ್ಟು, 4 ಲಕ್ಷ ಎಕರೆಯನ್ನು ನಮ್ಮದಾಗಿಸೋಣ....

ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...


- ಬಿ.ಎಂ.ಬಶೀರ್

ರಾಜಕೀಯ ಪಕ್ಷಗಳ ಆತ್ಮವಿಮರ್ಶೆ ಅಗತ್ಯ

ಕೇಂದ್ರ ಅಥವಾ ರಾಜ್ಯಗಳಲ್ಲಿ ಯಾವುದೇ ಸರಕಾರ ಅಧಿಕಾರ ವಹಿಸಿಕೊಂಡ ಕೂಡಲೇ ರಾಷ್ಟ್ರಪತಿಗಳು ಮತ್ತು ರ ...


- ನಾ ದಿವಾಕರ್