ಹೊಸದಿಲ್ಲಿ, ಜು. 9: ಮುಂದಿನ ತಿಂಗಳು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಹಾಮಿದ್ ಅನ್ಸಾರಿರನ್ನು ಎರಡನೆ ಅವಧಿಗೆ ಮುಂದುವರಿಸಲು ಕಾಂಗ್ರೆಸ್ ಉತ್ಸುಕವಾಗಿದ್ದು, ಈ ಸಂಬಂಧ ಅವರಿಗೆ ಬೆಂಬಲ ಕೋರಲು ಮನಮೋಹನ್ ಸಿಂಗ್ ಮುಂದಾಗಿದ್ದಾರೆ.ಈ ಕುರಿತು ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಸಿಂಗ್ ಶನಿವಾರ ಚರ್ಚೆ ನಡೆಸಿದ್ದು, ಜೆಡಿಎಸ್ ಅನ್ಸಾರಿರವರಿಗೆ ಬೆಂಬಲ ಸೂಚಿಸಿದೆ.ಚರ್ಚೆಯ ವೇಳೆ ಹಾಮಿದ್ ಅನ್ಸಾರಿ ಅವರ ಹೆಸರು ಮಾತ್ರ ಪ್ರಸ್ತಾಪವಾಗಿದ್ದು, ಅವರಿಗೆ ಜೆಡಿಎಸ್ ಬೆಂಬಲ ನೀಡಲಿದೆ ಎಂದು ದೇವೇಗೌಡ ತಿಳಿಸಿದರು ಎಂದು ಜೆಡಿಎಸ್ ವಕ್ತಾರ ದಾನಿಶ್ ಅಲಿ ತಿಳಿಸಿದ್ದಾರೆ. ಅನ್ಸಾರಿರನ್ನು ಎರಡನೆ ಅವಧಿಗೆ ಮುಂದುವರಿಸುವುದು ಅಲ್ಪಸಂಖ್ಯಾತ ವರ್ಗಕ್ಕೆ ಉತ್ತಮ ಸಂದೇಶ ತಲುಪಿಸುತ್ತದೆ ಎಂದು ಕಾಂಗ್ರೆಸ್ನ ಒಂದು ವಲಯ ಭಾವಿಸಿ ಕೆಲ ದಿನಗಳಿಂದ ಅವರ ಹೆಸರನ್ನು ಮಾತ್ರ ತೇಲಿ ಬಿಟ್ಟಿತ್ತು.
ಇದಕ್ಕೆ ಸೋನಿಯಾ ಕೂಡಾ ಸಮ್ಮತಿಸಿದ್ದರಿಂದ ಪ್ರಧಾನಿ ಮನಮೋಹನ್ ಸಿಂಗ್ ಇದೀಗ ರಂಗ ಪ್ರವೇಶಿಸಿದ್ದು, ಇಂದು ಸಿಪಿಎಂನ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ರೊಂದಿಗೆ ಈ ಕುರಿತು ಸಮಾಲೋಚನೆ ನಡೆಸಿದರು.ರಾಷ್ಟ್ರಪತಿ ಚುನಾವಣೆ ಸಮಯದಲ್ಲಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಮತ್ತು ಅಕಾಲಿ ದಳದ ಮುಖ್ಯಸ್ಥ ಹಾಗೂ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಹೆಸರು ಕೇಳಿ ಬಂದಿತ್ತು.
ಅಭ್ಯರ್ಥಿ ಕಣಕ್ಕೆ-ಬಿಜೆಪಿ: ಉಪ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ತನ್ನ ಸ್ವಂತ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದ್ದು, ಯುಪಿಎ ಅಭ್ಯರ್ಥಿಗೆ ಬೆಂಬಲ ನೀಡುವುದಿಲ್ಲ ಎಂದು ಪಕ್ಷದ ವಕ್ತಾರ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಸ್ವಾಭಾವಿಕವಾದ ರೀತಿಯಲ್ಲಿ ಹೋರಾಟ ನಡೆಸಲಿದ್ದು, ಈ ಸಂಬಂಧ ನಿರ್ಧಾರ ತೆಗೆದುಕೊಳ್ಳಲು ಎನ್ಡಿಎ ಮೈತ್ರಿ ಪಕ್ಷಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದರು. ಉಪ ರಾಷ್ಟ್ರಪತಿ ಚುನಾವಣೆ ಆ.8ರಂದು ನಡೆಯಲಿದ್ದು, ಜು.20 ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿದೆ.
ಲೋಕಾಯುಕ್ತಕ್ಕೆ ಇನ್ನಷ್ಟು ಅಧಿಕಾರ ಹೇಗೆ ಚುನಾವಣಾ ಆಯೋಗಕ್ಕೆ ಟಿ.ಎನ್.ಶೇಷನ್ ಅವರು ಜೀವಕೊಟ್ಟರೋ ಹಾಗೆಯೇ ಕರ್ನಾಟಕದಲ್ಲಿ ಲೋಕಾಯುಕ್ತವೆಂಬ ಸಂಸ್ಥೆಯಿರುವುದು ಬ ...
Click here to post your views ದಂಡು ಮೇಜಿನ ಸಭೆಯಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಗಾಂಧಿಯವರು ಅಸ್ಪೃಶ್ಯರ ಪ್ರಮುಖ ಶತ ...
ಪ್ರತಿ ವರ್ಷ ವಿಶ್ವದಾದ್ಯಂತ 100 ಮಿಲಿಯನ್ ಡೆಂಗ್ ರೋಗದ ಪ್ರಕರಣಗಳು ವರದಿಯಾಗುತ್ತಿದ್ದು, ನಮ್ಮ ರ ...
ರಾಜ್ಯಸರಕಾರ ರಾಜ್ಯದ ಹಾಗೂ ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಉನ್ನತ ಆಡಳಿತಕ್ಕಾಗ ...
ನವ ಉದಾರೀಕರಣದ ಕೂಪಕ್ಕೆ ದೇಶವನ್ನು ತಳ್ಳಿದ ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರಕ್ಕ ...
ಸುಮಾರು ನಾಲ್ಕೈದು ವರ್ಷಗಳಿಂದ ಆಗಾಗ್ಗೆ ಉದುರಿಸುತ್ತಲೇ ಬಂದಿರುವ ಅಣಿಮುತ್ತನ್ನು ಈಗ ಮತ್ತ ...
ಆದರ್ಶದ ತಾತ್ಪರ್ಯವೆಂದರೆ: ವೈಯಕ್ತಿಕವಾಗಿ ಏನನ್ನು ಬಯಸದೇ ಸಂತೋಷವಾಗಿ ಈ ಸಮಾಜಕ್ಕೆ ದುಡಿಯುವುದು ಎಂಬ ...
ಬಾಬರಿ ಮಸೀದಿಯಿದ್ದ 2.77 ಎಕರೆ ಭೂಮಿಯೇ ಭಾರತ ಮುಸ್ಲಿಮರ ಸರ್ವ ಸಮಸ್ಯೆಗಳಿಗೆ ಪರಿಹಾರ ಎಂಬ ...
ಕೇಂದ್ರ ಅಥವಾ ರಾಜ್ಯಗಳಲ್ಲಿ ಯಾವುದೇ ಸರಕಾರ ಅಧಿಕಾರ ವಹಿಸಿಕೊಂಡ ಕೂಡಲೇ ರಾಷ್ಟ್ರಪತಿಗಳು ಮತ್ತು ರ ...