mail-img print-img

ಇರಾನ್ ಲೆಕ್ಕಾಚಾರ ಬದಲಾಗದು: ಖಾಮಿನೈ

ಬುಧವಾರ - ಜುಲೈ -25-2012

ಟೆಹ್ರಾನ್, ಜು.25: ವಿದೇಶಿ ಒತ್ತಡದ ಮೂಲಕ ಎಂದಿಗೂ ಇರಾನ್‌ನ ಲೆಕ್ಕಚಾರವನ್ನು ಬದಲಾಯಿಸಲಾಗದು ಎಂದು ಇರಾನಿನ ಇಸ್ಲಾಮಿಕ್ ಕ್ರಾಂತಿಯ ನಾಯಕ ಆಯತುಲ್ಲಾ ಸಯೀದ್ ಅಲಿ ಖಾಮಿನೈ ಹೇಳಿದ್ದಾರೆ. ಪಶ್ಚಿಮದ ರಾಷ್ಟ್ರಗಳು ಗಂಭೀರ ಬಿಕ್ಕಟ್ಟನ್ನು ಎದುರಿಸುತ್ತಿರುವುದಾಗಿಯೂ ಅವರು ಹೇಳಿದ್ದಾರೆ.

ಟೆಹ್ರಾನ್‌ನಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಇರಾನ್‌ನ ಅಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ ಅವರು ಈ ಹೇಳಿಕೆ ನೀಡಿದ್ದಾರೆ. ಇರಾನ್ ರಾಷ್ಟ್ರವು ಎಂದಿಗೂ ಪಾ  ಶ್ಚಿಮಾತ್ಯ ಒತ್ತಡಕ್ಕೆ ಮಣಿಯದು ಹಾಗೂ ಅಮೆರಿಕ ಕಲ್ಪಿತ ಇರಾನ್ ಮೇಲಿನ ನಿರ್ಬಂಧಗಳು ಇರಾನ್‌ನ ಅಧಿಕಾರಿಗಳಲ್ಲಿ ತಮ್ಮ ರಾಷ್ಟ್ರೀಯ ಹಕ್ಕುಗಳಿಗಾಗಿ ಹೋರಾಡುವ ಕೆಚ್ಚನ್ನು ಮೂಡಿಸುವಲ್ಲಿ ಪರಿಣಾಮಕಾರಿಯಾಗಿದೆ ಎಂದು ಆಯತುಲ್ಲಾ ಖಾಮಿನೈ ಅಭಿಪ್ರಾಯಿಸಿದ್ದಾರೆ.

‘‘ಅವರು (ಇರಾನ್‌ನ ಶತ್ರುಗಳು) ಹೆಚ್ಚಿನ ನಿರ್ಬಂಧಗಳು ಹಾಗೂ ಒತ್ತಡಗಳನ್ನು ಹೇರುವ ಮೂಲಕ ಇರಾನ್ ಅಧಿಕಾರಿಗಳ ಲೆಕ್ಕಾಚಾರವನ್ನು ಬುಡಮೇಲು ಮಾಡಬಹುದೆಂದು ಭಾವಿಸಿದ್ದಾರೆ. ಆದರೆ ವಾಸ್ತವಿಕವಾಗಿ, ನಮ್ಮ ಲೆಕ್ಕಚಾರದ ಬಗ್ಗೆ ನಾವು ಮರು ಚಿಂತನೆ ಮಾಡುವುದಿಲ್ಲ. ಆದರೆ ನಾವು ದೃಢ ನಿಶ್ಚಯದೊಂದಿಗೆ ನಮ್ಮ ಲೆಕ್ಕಾಚಾರದಂತೆಯೇ ಮುಂದುವರಿಯಲಿದ್ದೇವೆ. ಪಶ್ಚಿಮದ ಆರ್ಥಿಕ ದಿಗ್ಬಂಧನಗಳಿಗೆ ಇರಾನ್ ಸೂಕ್ತ ಪ್ರತಿರೋಧ ತೋರಲಿದೆ’’ ಎಂದು ಖಾಮಿನೈ ವಿವರಿಸಿದ್ದಾರೆ.
 

‘‘ಅಮೆರಿಕ ಹಾಗೂ ಅದರ ಮಿತ್ರರಾಷ್ಟ್ರಗಳು ಇರಾನ್‌ನ ಅಣು ಇಂಧನ ಕಾರ್ಯಕ್ರಮ ಹಾಗೂ ಮಾನವ ಹಕ್ಕು ವಿಚಾರಗಳ ಮೇಲೆ ಒತ್ತಡ ಹೇರಲು ಯತ್ನಿಸುತ್ತಿವೆ. ಆದರೆ ಇಸ್ಲಾಮಿಕ್ ಸ್ಥಾಪನೆಗಳೊಂದಿಗಿನ ಅವರ ವೈರತ್ವವೇ ನಿಜವಾಗಿಯೂ ಅವರು ಎದುರಿಸುತ್ತಿರುವ ಸಮಸ್ಯೆಯಾಗಿದೆ. ಇಸ್ಲಾಮಿಕ್ ಸ್ಥಾಪನೆಗಳೊಂದಿಗಿನ ದ್ವೇಷವನ್ನು ಅವರು ಪರಮಾಣು ಇಂಧನ ಕಾರ್ಯಕ್ರಮದ ಹೆಸರಿನಲ್ಲಿ ಈಡೇರಿಸಿಕೊಳ್ಳಲು ಯತ್ನಿಸುತ್ತಿದ್ದಾರೆ’’ ಎಂದು ಇದೇ ವೇಳೆ ಖಾಮಿನೈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಆಹಾರದ ಹಾಹಾಕಾರ

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಹದಿನಾಲ್ಕು ವರ್ಷದ ಹುಡುಗಿ ಮತ್ತು ಮೂರು ವರ್ಷದ ಹುಡುಗ ಹಸಿವಿನಿಂದಾಗಿ ಬರ್ಬರ ಸಾವನ್ನಪ್ಪಿದ್ದಾರೆ. ನಾಝ್ರಾ ಖಾತೂನ್ ಎನ್ನ ...


ನಿಮ್ಮ ಅನಿಸಿಕೆ

postClick here to post your views
EPAPER
access

ಇದು ಪ್ರಜಾಪ್ರಭುತ್ವದ ಪವಾಡ

ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...


- ಸನತ್‌ಕುಮಾರ ಬೆಳಗಲಿ

ಉತ್ತರಕುಮಾರಿಯರು, ಉತ್ತರಭೂಪರು ಮತ್ತು ಉತ್ತರಪತ್ರಿಕೆಗಳು!

ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...


- ಅಶೋಕ್ ಶೆಟ್ಟರ್

ಮನೋಲ್ಲಾಸದ ನಾಲೆಗಳು: (ಭಾಗ-1)

ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...


- ಶೂದ್ರ ಶ್ರೀನಿವಾಸ್

ಐದು ವರ್ಷದ ಹಸುಳೆಗೆ ಉತ್ತರಿಸುವ ದಾರ್ಷ್ಟ ನಮಗಿದೆಯೆ?

ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...


- ನಾ ದಿವಾಕರ್

ವಿಪ್ರ ಸಮ್ಮೇಳನದಂಥ ಸಂಕುಚಿತ ಜಾತಿ ಕೂಟಗಳು ಉದಾತ್ತ ಚಿಂತನೆಗೆ ವೇದಿಕೆಯಾಗಲಿ...

ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...


- ದುರ್ಗಾ ಎಸ್. ಭಟ್

ಅಕ್ಷರ ಸೇವೆಯಿಂದ ಜನಸೇವೆಗೆ;ತೆಂಕಮಿಜಾರಿನ ಮುತ್ತು

ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...


- ಪ್ರೇಮಶ್ರೀ ಕಲ್ಲಬೆಟ್ಟು

ನಾನು ಮತ್ತು ದೇವರು

 ರಿನಲ್ಲಿದ್ದಾಗ ಪೂಜೆ ಮಾಡುತ್ತಿದ್ದದ್ದು ವಿಚಿತ್ರ ಅನಿಸುತ್ತಿತ್ತು. ಅವಳು ರಾತ್ರ ...


- ಸುನೀಲ್ ರಾವ್

ಬಿಟ್ಟಿ ಅಂಕದ ಪಿಯುಸಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಬುಟ್ಟಿಗೆಸೆ!

 ಮಾನ್ಯರೆ,

ಪ್ರಶ್ನೆ ಪತ್ರಿಕೆಗಳಲ್ಲಿ ದೋಷಗಳನ್ನು ನೀಡುವ ತನ್ನ ಸಂಪ್ರದಾಯವನ್ನು ಪಿಯುಸಿ ಮಂಡಳಿಯ ...


- -‘ಮಾತರಿ’ ಸಾಗ