ಮೊಳಕೆಯಿಂದ ಹೊರ ಹೊಮ್ಮುತ್ತಿದೆ ಪುಟಾಣಿ ವಿಜ್ಞಾನಿಗಳ ಪ್ರತಿಭೆ
mail-img print-img

ಮೊಳಕೆಯಿಂದ ಹೊರ ಹೊಮ್ಮುತ್ತಿದೆ ಪುಟಾಣಿ ವಿಜ್ಞಾನಿಗಳ ಪ್ರತಿಭೆ

- -ಅಝೀಝ್ ಕಿರುಗುಂದ
ಮಂಗಳವಾರ - ಜುಲೈ -24-2012

ಚಿಕ್ಕಮಗಳೂರು ಜಿಲ್ಲಾ ಕೇಂದ್ರದ ವಿಜಯಪುರ ಬಡಾವಣೆಯಲ್ಲಿರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಪುಟಾಣಿ ವಿಜ್ಞಾನಿಗಳಿಗೊಂದು ತಮ್ಮ ಪ್ರತಿಭೆ ಅನಾವರಣಕ್ಕೆ ವೇದಿಕೆ ಸಿದ್ಧವಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ಪ್ರಾತ್ಯಕ್ಷಿಕೆಗಳು ಗಮನ ಸೆಳೆಯುತ್ತಿವೆ. ಎಳೆಯ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಒಂದು ವಾರದ ಮಟ್ಟಿಗೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮಕ್ಕಳ ಪ್ರತಿಭೆ ಕಂಡು ಸಾರ್ವಜನಿಕರು ನಿಬ್ಬೆರಗಾಗಿದ್ದಾರೆ.ಚಿಕ್ಕಮಗಳೂರು ಜಿಲ್ಲಾ ಕೇಂದ್ರದ ಒಕ್ಕಲಿಗರ ಸಮುದಾಯ ಭವನದ ಸಭಾಂಗಣದ ತುಂಬಾ ಮುಂದಿನ ಒಂದು ವಾರಗಳ ಕಾಲ ಮಕ್ಕಳ ಕಲರವ ಕೇಳಿ ಬರಲಿದೆ. ಮಕ್ಕಳು ತಯಾರಿಸಿದ ಪವನ ಶಕ್ತಿ ಬಳಿಸಿ ವಿದ್ಯುತ್ ಉತ್ವಾದನೆ, ರೇಡಿಯೋ ಕಾರ್ಯ ನಿರ್ವಹಿಸುವ ಬಗೆ, ಜೈವಿಕ ಇಂಧನ ಉತ್ಪಾದನೆ ರೀತಿ, ಜಾಗತಿಕ ತಾಪಮಾನ ಏರಿಕೆ ಕಾರಣಗಳು, ಸೌರಶಕ್ತಿ ಬಳಸಿ ನೀರು ಕಾಯಿಸುವ ವಿಧಾನ, ಮಳೆ ನೀರು ಕೊಯ್ಲು, ಹೀಗೆ ಸಾವಿರಾರು ವಿಜ್ಞಾನದ ಪ್ರಾತ್ಯಕ್ಷಿಕೆಗಳು ಹಾಗೂ ಅವುಗಳ ಬಗ್ಗೆ ವಿವರಣೆ ನೀಡುತ್ತಿರುವ ಪುಟಾಣಿ ವಿಜ್ಞಾನಿಗಳು ಸಾರ್ವಜನಿಕರನ್ನು ಹೊಸದೊಂದು ವಿಜ್ಞಾನದ ಲೋಕಕ್ಕೆ ಕರೆದೊಯ್ದಿದ್ದು ನೋಡುಗರನ್ನು ವಿಸ್ಮಯ ಮೂಡಿಸುತ್ತದೆ.

ದಿಲ್ಲಿಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಇಲಾಖೆ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ಮಕ್ಕಳು ಸ್ವತಃ ತಾವೇ ತಯಾರಿಸಿದ ಪ್ರಾತ್ಯಕ್ಷಿಕೆ ಮೂಲಕ ತಮ್ಮ ಪ್ರತಿಭೆ ಸಾಕ್ಷಾತ್ಕಾರಗೊಳಿಸಿ ಸಾರ್ವಜನಿಕರನ್ನು ದಿಗ್ಮೂಡಗೊಳಿಸುತ್ತಿದ್ದಾರೆ. ಮಕ್ಕಳ ಪ್ರತಿಭೆ ವಿಜ್ಞಾನದ ಬಗ್ಗೆ ಇರುವ ಆಸಕ್ತಿ ಕಂಡು ಸಾರ್ವಜನಿಕರು ಮುಕ್ತ ಕಂಠಗಳಿಂದ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ.

ಮಕ್ಕಳ ಪ್ರತಿಭೆಯನ್ನು ಹೊರ ತರುವ ಇಂಥಹ ಕಾರ್ಯಕ್ರಮಗಳು ಪ್ರಭಾವಶಾಲಿ ರೀತಿಯಲ್ಲಿ ಇನ್ನಷ್ಟು ಹೆಚ್ಚಾಗಿ ನಡೆಯಲಿ ಎನ್ನುವುದು ವಿದ್ಯಾರ್ಥಿ ಪೋಷಕರ ಅಭಿಮತವಾಗಿದೆ.ಶಾಲಾ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಹೆಚ್ಚು ಆಸಕ್ತಿ ಮೂಡಿಸುವ ಸಲುವಾಗಿ ಶಿಕ್ಷಣ ಇಲಾಖೆ ಮೂಲಕ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಈ ಕಾರ್ಯಕ್ರಮ ಆಯೋಜಿಸಿದೆ. ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಈ ಕಾರ್ಯಕ್ರಮ ನಡೆಯುತ್ತಿದೆ. ಜಿಲ್ಲಾ ಮಟ್ಟದಲ್ಲಿ ನಡೆಯುತ್ತಿರುವ ಈ ಪ್ರದರ್ಶನದಲ್ಲಿ ಆಯ್ಕೆಯಾದ ಅತ್ಯುತ್ತಮ ಶೇ.5 ಪ್ರಾತ್ಯಾಕ್ಷಿಕೆಗಳು ರಾಜ್ಯ ಮಟ್ಟದ ಪ್ರದರ್ಶನಕ್ಕೆ ಆಯ್ಕೆಗೊಳ್ಳಲಿವೆ. ಅಲ್ಲಿ ಆಯ್ಕೆಯಾದವರು ರಾಷ್ಟ್ರ ಮಟ್ಟದಲ್ಲಿ ತಮ್ಮ ನಾಡಿನ ಕೀರ್ತಿ ಪತಾಕೆಯನ್ನು ಹಾರಿಸುವ ಪ್ರಯತ್ನ ನಡೆಸಲಿದ್ದಾರೆ.

ಜಿಲ್ಲಾ ಮಟ್ಟದ ಈ ಪ್ರದರ್ಶನ ಒಟ್ಟು 6 ದಿನಗಳ ಕಾಲ ವೈಭವದಿಂದ ನಡೆಯಲಿದೆ. ಮೂಡಿಗೆರೆ, ಶೃಂಗೇರಿ, ಎನ್.ಆರ್.ಪುರ, ಕಡೂರು, ತರೀಕೆರೆ ಮತ್ತು ಕೊಪ್ಪತಾಲ್ಲೂಕು ಸೇರಿದಂತೆ ಚಿಕ್ಕಮಗಳೂರು ತಾಲೂಕಿನ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವಿವಿಧ ತಾಲೂಕುಗಳಿಂದ ಬರುವ ಸರಕಾರಿ ಶಾಲೆಗಳ ಸರಿ ಸುಮಾರು ಒಂದು ಸಾವಿರಕ್ಕಿಂತ ಅಧಿಕ ವಿದ್ಯಾರ್ಥಿಗಳು ತಮ್ಮ ಪ್ರಾತ್ಯಕ್ಷಿಗಳನ್ನು ಪ್ರದರ್ಶಿಸಲಿದ್ದಾರೆ. ಚಿಕ್ಕ ಪುಟ್ಟ ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಬೆಳೆಸುವ ನಿಟ್ಟಿನಲ್ಲಿ ಸರಕಾರದ ಶಾಲಾ ಮಕ್ಕಳಿಗಾಗಿ ಹಮ್ಮಿಕೊಂಡ ಈ ಕಾರ್ಯಕ್ರಮ ನಿಜಕ್ಕೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ.

ಬಾಲ ವಿಜ್ಞಾನಿಗಳು ಪ್ರಾತ್ಯಾಕ್ಷಿಕೆಗಳ ಮೂಲಕ ವಿಜ್ಞಾನದ ಕೌತುಕ, ರಹಸ್ಯಗಳನ್ನು ಸಾರ್ವಜನಿಕರ ಎದುರು ತೆರೆದಿಡುವ ಮೂಲಕ ತಮ್ಮ ಪ್ರತಿಭೆ ಅನಾವರಣ ಮಾಡುವ ಸುಯೋಗ ಪಡೆದಿದ್ದಾರೆ. ‘ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬಂತೆ ಮಕ್ಕಳಿಗೆ ಬಾಲ್ಯದಲ್ಲಿ ಇಂತಹ ಪ್ರೋತ್ಸಾಹ ನೀಡಿದಲ್ಲಿ ಮುಂದೊಂದು ದಿನ ಸರಕಾರಿ ಶಾಲೆಗಳ ಬಡ ಮಕ್ಕಳು ಖಾಸಗಿ ಶಾಲೆಗಳ ಮಕ್ಕಳಿಗಿಂತ ಹೆಚ್ಚಿನ ಸಾಧನೆ ಮಾಡುವುದರಲ್ಲಿ ಸಂಶಯವಿಲ್ಲ. ಆ ಕಾಲ ಆದಷ್ಟು ಶೀಘ್ರದಲ್ಲಿ ಕೂಡಿ ಬರುವಂತಾಗಲಿ ಅಲ್ಲವೇ?
*


Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಮುಂಗಾರಿನ ಆಗಮನ:ಸರಕಾರ ಜೋಪಾನ

ರಾಜ್ಯಾದ್ಯಂತ ಮಳೆ ಚುರುಕುಗೊಳ್ಳುತ್ತಿದೆ. ಈ ಸಾಲಿನಲ್ಲಿ ಮಳೆ ನಿರೀಕ್ಷೆಯಷ್ಟು ಬರದೆ ಇದ್ದರೂ, ಮುಂದಿನ ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆ ರಾಜ್ಯಾದ್ಯ ...


ನಿಮ್ಮ ಅನಿಸಿಕೆ

postClick here to post your views
EPAPER
access

ಸರ್ವೋದಯ ಸಮಾಜದ ಕನಸು:ಭಾಗ-1

ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...


- ಡಾ.ಮೊಗಳ್ಳಿ ಗಣೇಶ್

ನನ್ನ ಅತ್ತಿಗೆ ಗೋವು ಸಾಕಿದ್ದು

ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...


- ಬಿ. ಎಂ. ಬಶೀರ್

ಇದು ಪ್ರಜಾಪ್ರಭುತ್ವದ ಪವಾಡ

ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...


- ಸನತ್‌ಕುಮಾರ ಬೆಳಗಲಿ

ಉತ್ತರಕುಮಾರಿಯರು, ಉತ್ತರಭೂಪರು ಮತ್ತು ಉತ್ತರಪತ್ರಿಕೆಗಳು!

ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...


- ಅಶೋಕ್ ಶೆಟ್ಟರ್

ಮನೋಲ್ಲಾಸದ ನಾಲೆಗಳು: (ಭಾಗ-1)

ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...


- ಶೂದ್ರ ಶ್ರೀನಿವಾಸ್

ಐದು ವರ್ಷದ ಹಸುಳೆಗೆ ಉತ್ತರಿಸುವ ದಾರ್ಷ್ಟ ನಮಗಿದೆಯೆ?

ಭಾರತ ದೇಶಕ್ಕೆ ತನ್ನದೇ ಆದ ಭವ್ಯ(?) ಪರಂಪರೆ, ಇತಿಹಾಸ, ಸಂಸ್ಕೃತಿ, ಧಾರ್ಮಿಕ ತಳಹದಿ, ಆಧ್ಯಾತ್ಮಿಕ ಚ ...


- ನಾ ದಿವಾಕರ್

ವಿಪ್ರ ಸಮ್ಮೇಳನದಂಥ ಸಂಕುಚಿತ ಜಾತಿ ಕೂಟಗಳು ಉದಾತ್ತ ಚಿಂತನೆಗೆ ವೇದಿಕೆಯಾಗಲಿ...

ಶಿಕ್ಷಣತಜ್ಞ ಮತ್ತು ಚಿಂತಕ ಸಿ.ಎಚ್.ಕೃಷ್ಣಶಾಸ್ತ್ರಿ ಬಾಳಿಲ ಅವರ ವಿಪ್ರ ಜಾಗೃತಿ ಸಮ್ಮೇಳನದ ಫಲಶ ...


- ದುರ್ಗಾ ಎಸ್. ಭಟ್

ಅಕ್ಷರ ಸೇವೆಯಿಂದ ಜನಸೇವೆಗೆ;ತೆಂಕಮಿಜಾರಿನ ಮುತ್ತು

ಪರಿಶಿಷ್ಟ ಜಾತಿಯ ನಲ್ಕೆ ಸಮುದಾಯದ ಮಹಿಳೆ ಮುತ್ತು ಅವರು 1999ರಲ್ಲಿ ತೆಂಕಮಿಜಾರು ಗ್ರಾಮಪಂಚಾಯತ್ ವ ...


- ಪ್ರೇಮಶ್ರೀ ಕಲ್ಲಬೆಟ್ಟು