
ಹೊಸದಿಲ್ಲಿ, ಜು. 9: ಉಚಿತ ಮತ್ತು ಕಡ್ಡಾಯ ಶಿಕ್ಷಣವನ್ನು ಪ್ರತಿಪಾದಿಸುವ ಶಿಕ್ಷಣದ ಹಕ್ಕು ಕಾಯ್ದೆಯು ಜಾರಿಗೊಂಡು ಎರಡು ವರ್ಷಗಳು ಕಳೆದಿದ್ದರೂ, ಈ ಕಾಯ್ದೆಯ ನಿಯಮದನ್ವಯ ಶೇ. 95ಕ್ಕೂ ಅಧಿಕ ಶಾಲೆಗಳು ಕಾರ್ಯ ನಿರ್ವಹಿಸಿಲ್ಲ ಎಂದು ಸಮೀಕ್ಷೆಯೊಂದು ತಿಳಿಸಿದೆ. ದೇಶಾದ್ಯಂತ ಆರ್ಟಿಇ ವೇದಿಕೆಯು ಪಡೆದಿರುವ ಅಂಕಿ ಅಂಶಗಳ ಪ್ರಕಾರ, ಶೇ. 95ಕ್ಕೂ ಅಧಿಕ ಶಾಲೆಗಳು ಕಾಯ್ದೆಯ ನಿರ್ದೇಶನಗಳನ್ನು ಪಾಲಿಸಿಲ್ಲ ಎಂದು ಈ ಕುರಿತು ಸಮೀಕ್ಷೆ ನಡೆಸಿರುವ ಎನ್ಜಿಒ ಒಂದು ಹೇಳಿದೆ. ಶಿಕ್ಷಕರಿಗೆ ತರಬೇತಿಯ ಕೊರತೆಯಿರುವುದು ಶಿಕ್ಷಣದ ಗುಣಮಟ್ಟದ ಕುಸಿತಕ್ಕೆ ಕಾರಣವಾಗಿದೆ ಎಂಬ ಅಂಶವನ್ನೂ ಅದು ಪತ್ತೆ ಹಚ್ಚಿದೆ. ದೇಶಾದ್ಯಂತ ಮಂಜೂರಾಗಿರುವ ಶಿಕ್ಷಕರ ಹುದ್ದೆಗಳಲ್ಲಿ ಶೇ. 36ರಷ್ಟು ಹುದ್ದೆಗಳು ಖಾಲಿಯಿವೆ. ಅವುಗಳಲ್ಲಿ ರಾಷ್ಟ್ರ ರಾಜಧಾನಿಯೊಂದರಲ್ಲೇ ಸುಮಾರು 21,000 ಶಿಕ್ಷಕ ಹುದ್ದೆಗಳು ಖಾಲಿಯಿವೆ ಎಂದು ವೇದಿಕೆಯು ಹೇಳಿದೆ. ಕಡ್ಡಾಯ ಶಿಕ್ಷಣ ಹಕ್ಕಿನ ಪ್ರಕಾರ, ಶಿಕ್ಷಕರ ಕೊರತೆಯು ಮಂಜೂರಾದ ಹುದ್ದೆಯ ಶೇ. 10ನ್ನು ಮೀರುವಂತಿಲ್ಲ.
ಆದರೆ ಪ್ರಸ್ತುತ ಶೇ. 36ರಷ್ಟು ಶಿಕ್ಷಕ ಹುದ್ದೆಗಳು ಖಾಲಿಯಿರುವುದು ಶಿಕ್ಷಣದ ಗುಣಮಟ್ಟದ ಮೇಲೆ ಪರಿಣಾಮ ಬೀರುವುದಕ್ಕೆ ಕಾರಣವಾಗಿದೆ ಎಂದು ಸಂಸ್ಥೆಯು ಹೇಳಿದೆ.ರಾಷ್ಟ್ರೀಯ ಸರಾಸರಿಯ ಅಂಕಿ ಅಂಶಗಳನ್ನು ಕಂಡಾಗ ಶಿಕ್ಷಕ-ವಿದ್ಯಾರ್ಥಿಗಳ ಅನುಪಾತ ಆತಂಕ ತರುವಂತಿದೆ. ರಾಷ್ಟ್ರೀಯ ಸರಾಸರಿ ಶಿಕ್ಷಕ-ವಿದ್ಯಾರ್ಥಿ ಅನುಪಾತ 1:80 ಇದೆ. ಆದರೆ ಕಾಯ್ದೆಯ ಪ್ರಕಾರ ಇದು ಪ್ರಾಥಮಿಕ ಶಿಕ್ಷಣದ ಹಂತದಲ್ಲಿ 1:30 ಮತ್ತು ಪ್ರೌಢ ಶಿಕ್ಷಣದ ಹಂತದಲ್ಲಿ ಶೇ. 1:35ರಷ್ಟಿರಬೇಕು ಎಂದಿದೆ. ಕಾಯ್ದೆಯ ಜಾರಿಗೆ ಕುರಿತಂತೆ ಜನತೆಗೆ ಜಾಗೃತಿ ಮೂಡಿಸಲು ಸಂಘಟನೆಗಳು ತೊಡಗಿಸಿಕೊಳ್ಳಬೇಕು ಎಂದು ವೇದಿಕೆಯ ಮುಖ್ಯಸ್ಥ ಅಂಬರೀಶ್ ರೈ ಹೇಳಿದ್ದಾರೆ.
ಕರ್ನಾಟಕದ ಜನಸಂಖ್ಯೆ ಕಳೆದ ಹತ್ತು ವರ್ಷಗಳಲ್ಲಿ ಶೇ.15.60ರಷ್ಟು ಹೆಚ್ಚಳವಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಯಾಗಿದೆ. 2011ರಲ್ಲಿ ನಡೆದ ಜನಗಣತಿಯ ಅಂತಿಮ ಅಂಕಿ-ಸಂಖ ...
Click here to post your views ಕಳಂಕಿತರನ್ನು ಸಚಿವ ಸಂಪುಟದಿಂದ ಹೊರಗಿಟ್ಟು ಭೇಷ್ ಅನಿಸಿಕೊಂಡ ಸಿದ್ದು, ಖಾತೆ ಹಂಚಿಕೆಯಲ್ಲ ...
ಹಾಗೆಯೇ ಕಳೆದ ಒಂದು ದಶಕದಿಂದ ಕ್ರಿಕೆಟ್ ಲೋಕದ ಶ್ರೇಷ್ಠ ಆಟಗಾರ ಇಮ್ರಾನ್ ಖಾನ್ ಅವರು ಪಾಕಿಸ ...
ಜನ ಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರ ಸ್ವಾವಲಂಬನೆಗೆ ಸೂಕ್ತವಾದ ಕಾರ್ಯಗಳನ್ನು ರೂಪಿಸಬೇಕ ...
ಸಿದ್ದರಾಮಯ್ಯ ಹೊಸ ಕನಸಿನ ಆಸೆ ಬಿತ್ತಿದ್ದಾರೆ. ಅವರ ಹೊಣೆಗಾರಿಕೆ ಹೆಚ್ಚಾಗಿದೆ. ದೇವರಾಜ ...
ನನ್ನ ಅತ್ತಿಗೆ (ಅಂದರೆ ಹಿರಿಯ ಕವಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಉಳ್ಳಾಲದ ...
ಎಲ್ಲೋ ಸಿದ್ದರಾಮನ ಹುಂಡಿಯಲ್ಲಿದ್ದ ಬಡ ಕುರುಬ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯ ...
ಬುದ್ಧನಿಗೆ ಜ್ಞಾನೋದಯ ಹೇಗಾಯಿತು?
ಸಿದ್ದಾರ್ಥ ಜನಿಸುವ ಮುನ್ನ ಆತನ ತಾಯಿ ರಾಣಿ ಮಹಾಮ ...
ಕಳೆದ ಒಂದು ವಾರದಿಂದ ಸ್ವಾತಂತ್ರ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಮತದಾನ ಕುರಿತು ಯ ...